ಯೆಹೋವ ದೇವರು ಮೋಶೆಯ ಮತ್ತು ಆರೋನನ ಸಂಗಡ ಮಾತನಾಡಿ ಹೇಳಿದ್ದೇನೆಂದರೆ,
KO
Copywork
Kannada OKCV · 4:1-20 The Duties of the Kohathites Carrying the Holy Things
성경필사는 빠르게 끝내는 입력 훈련이 아니라, 한 절씩 말씀의 문장과 흐름을 다시 붙드는 시간입니다. 입력 내용은 이 브라우저에 임시 저장되며, 로그인하면 계정에도 저장됩니다.
소제목 단위로 진행 · 민수기
“ಲೇವಿಯರೊಳಗೆ ಕೊಹಾತ್ಯರಲ್ಲಿಯ ಕುಟುಂಬಗಳನ್ನು ಗೋತ್ರಗಳನ್ನಾಗಿ ಲೆಕ್ಕಮಾಡು.
ಮೂವತ್ತು ವರ್ಷವಾದವರನ್ನೂ, ಅದಕ್ಕೆ ಮೇಲ್ಪಟ್ಟ ಪ್ರಾಯವುಳ್ಳ ಪುರುಷರನ್ನೂ ಅಂದರೆ ಐವತ್ತು ವರ್ಷದವರವರೆಗೆ ದೇವದರ್ಶನ ಗುಡಾರದಲ್ಲಿ ಕೆಲಸ ಮಾಡುವುದಕ್ಕೆ ಬರುವವರನ್ನು ಲೆಕ್ಕಮಾಡು.
“ದೇವದರ್ಶನದ ಗುಡಾರದಲ್ಲಿ ಕೊಹಾತ್ಯರು ಮಾಡುವ ಸೇವೆ ಯಾವುದೆಂದರೆ, ದೇವದರ್ಶನ ಗುಡಾರದ ಅತಿಪರಿಶುದ್ಧವಾದ ವಸ್ತುಗಳನ್ನು ಕಾಪಾಡುವುದು.
ಜನರು ಹೊರಡುವಾಗ, ಆರೋನನೂ, ಅವನ ಮಕ್ಕಳೂ ಒಳಗೆ ಹೋಗಿ ಪರದೆಯನ್ನು ಇಳಿಸಿ, ಅದರಿಂದ ಒಡಂಬಡಿಕೆಯ ಮಂಜೂಷವನ್ನು ಮುಚ್ಚಿ,
ಅದರ ಮೇಲೆ ಕಡಲುಹಂದಿಯ ಚರ್ಮದ ಹೊದಿಕೆಯನ್ನು ಹೊದಿಸಬೇಕು. ಅದರ ಮೇಲ್ಭಾಗದಲ್ಲಿ ಪೂರ್ಣವಾದ ನೀಲಿವಸ್ತ್ರವನ್ನು ಹಾಸಿ, ಕೋಲುಗಳನ್ನು ಅದರ ಸ್ಥಳದಲ್ಲಿ ಇಡಬೇಕು.
“ಸಮ್ಮುಖದ ರೊಟ್ಟಿಯ ಮೇಜಿನ ಮೇಲೆ ಅವರು ನೀಲಿವಸ್ತ್ರವನ್ನು ಹಾಸಿ, ಅದರ ಮೇಲೆ ಪಾತ್ರೆಗಳನ್ನು, ಸೌಟುಗಳನ್ನು, ಬೋಗುಣಿಗಳನ್ನು ಮತ್ತು ಪಾನಾರ್ಪಣೆಯ ಹೂಜಿಗಳನ್ನು ಇಡಬೇಕು. ನಿತ್ಯಾರ್ಪಣೆಯ ರೊಟ್ಟಿಯನ್ನು ಅದರ ಮೇಲೆ ಇಡಬೇಕು.
ಅವೆಲ್ಲವುಗಳ ಮೇಲೆ ಕಡುಗೆಂಪಾದ ವಸ್ತ್ರವನ್ನು ಹಾಸಿ, ಅದನ್ನು ಕಡಲುಹಂದಿಯ ಚರ್ಮಗಳ ಹೊದಿಕೆಯಿಂದ ಹೊದಿಸಿ, ಅದರ ಕೋಲುಗಳನ್ನು ಸರಿಯಾದ ಸ್ಥಳದಲ್ಲಿ ಇಡಬೇಕು.
“ಇದಲ್ಲದೆ ಅವರು ನೀಲಿವಸ್ತ್ರವನ್ನು ತೆಗೆದುಕೊಂಡು, ಅದರಿಂದ ದೀಪಸ್ತಂಭವನ್ನೂ, ಅದರ ದೀಪಗಳನ್ನೂ, ಅದರ ಬತ್ತಿ ಕತ್ತರಿಸುವ ಸಲಕರಣೆಗಳನ್ನೂ, ಅದರ ಬಟ್ಟಲುಗಳನ್ನೂ, ಅದಕ್ಕೆ ಸೇವೆ ಮಾಡುವ ಸಕಲ ಎಣ್ಣೆಯ ಪಾತ್ರೆಗಳನ್ನೂ ಮುಚ್ಚಬೇಕು.
ಅವರು ಅದನ್ನೂ, ಅದರ ಎಲ್ಲಾ ಸಲಕರಣೆಗಳನ್ನೂ ಕಡಲುಹಂದಿಯ ಚರ್ಮಗಳ ಮುಚ್ಚಳದೊಳಗೆ ಇಟ್ಟು, ಅಡ್ಡ ದಂಡಕ್ಕೆ ಕಟ್ಟಬೇಕು.
“ಇದಲ್ಲದೆ ಬಂಗಾರದ ಬಲಿಪೀಠದ ಮೇಲೆ ಅವರು ನೀಲಿವಸ್ತ್ರವನ್ನು ಹಾಸಿ, ಅದನ್ನು ಕಡಲುಹಂದಿಯ ಚರ್ಮಗಳ ಮುಚ್ಚಳದೊಳಗೆ ಮುಚ್ಚಿ, ಅದರ ಕೋಲುಗಳನ್ನು ಸರಿಯಾದ ಸ್ಥಳದಲ್ಲಿ ಇಡಬೇಕು.
“ಪರಿಶುದ್ಧ ಸ್ಥಳದಲ್ಲಿ ಸೇವೆ ಮಾಡುವ ಸೇವೆಯ ಎಲ್ಲಾ ಸಲಕರಣೆಗಳನ್ನು ಅವರು ತೆಗೆದುಕೊಂಡು ನೀಲಿ ವಸ್ತ್ರದಿಂದ ಕಟ್ಟಿ, ಕಡಲುಹಂದಿಯ ಚರ್ಮಗಳ ಹೊದಿಕೆಯಿಂದ ಮುಚ್ಚಿ, ಅಡ್ಡ ದಂಡಕ್ಕೆ ಕಟ್ಟಬೇಕು.
“ಬಲಿಪೀಠದ ಬೂದಿಯನ್ನು ತೆಗೆದು, ಅದರ ಮೇಲೆ ಧೂಮ್ರವರ್ಣದ ವಸ್ತ್ರವನ್ನು ಹಾಸಿ,
ಅದರ ಮೇಲೆ ಸೇವೆ ಮಾಡುವ ಎಲ್ಲಾ ಸಲಕರಣೆಗಳನ್ನು, ಅಗ್ನಿ ಪಾತ್ರೆಗಳನ್ನು, ಮುಳ್ಳುಗಳನ್ನು, ಸಲಿಕೆಗಳನ್ನು, ಬೋಗುಣಿಗಳನ್ನು, ಬಲಿಪೀಠದ ಎಲ್ಲಾ ಸಲಕರಣೆಗಳನ್ನು ಅದರ ಮೇಲಿಟ್ಟು, ಕಡಲುಹಂದಿಯ ಚರ್ಮಗಳ ಹೊದಿಕೆಯನ್ನು ಹಾಕಿ, ಹೊರುವ ಕೋಲುಗಳನ್ನು ಇಡಬೇಕು.
“ಆರೋನನು ಮತ್ತು ಅವನ ಪುತ್ರರು ಪರಿಶುದ್ಧ ಸ್ಥಳವನ್ನೂ, ಪರಿಶುದ್ಧಸ್ಥಳದ ಎಲ್ಲಾ ಸಲಕರಣೆಗಳನ್ನೂ ಮುಚ್ಚಿದ ಮೇಲೆ, ಪಾಳೆಯವು ಹೊರಡುವಾಗ ಕೊಹಾತ್ಯರು ಅದನ್ನು ಹೊತ್ತುಕೊಂಡು ಹೋಗುವುದಕ್ಕೆ ಪ್ರವೇಶಿಸಬೇಕು. ಆದರೆ ಅವರು ಸಾಯದೆ ಇರಬೇಕಾದರೋ, ಪರಿಶುದ್ಧವಾದ ಯಾವುದನ್ನೂ ಮುಟ್ಟಬಾರದು. ದೇವದರ್ಶನದ ಗುಡಾರದಲ್ಲಿ ಕೊಹಾತ್ಯನ ಪುತ್ರರ ಹೊರೆಗಳು ಇವೇ ಆಗಿವೆ.
“ಯಾಜಕನಾದ ಆರೋನನ ಮಗ ಎಲಿಯಾಜರನ ಕೆಲಸ ಯಾವುದೆಂದರೆ, ದೀಪದ ಎಣ್ಣೆಯೂ, ಸುಗಂಧ ಧೂಪವೂ, ನಿತ್ಯದ ಧಾನ್ಯ ಸಮರ್ಪಣೆಯೂ, ಅಭಿಷೇಕದ ತೈಲವೂ, ಸಮಸ್ತ ಗುಡಾರವೂ, ಅದರಲ್ಲಿರುವ ಸಕಲವೂ, ಪರಿಶುದ್ಧ ಸ್ಥಳದಲ್ಲಿರುವ ಅದರ ಸಾಮಗ್ರಿಗಳೂ ಅವನ ಮೇಲ್ವಿಚಾರಣೆಯಲ್ಲಿರಬೇಕು.”
ಇದಲ್ಲದೆ ಯೆಹೋವ ದೇವರು ಮೋಶೆ ಆರೋನರ ಸಂಗಡ ಮಾತನಾಡಿ ಹೇಳಿದ್ದೇನೆಂದರೆ,
“ನೀವು ಲೇವಿಯರೊಳಗಿಂದ ಕೊಹಾತ್ಯರ ಗೋತ್ರದ ಕಟುಂಬಗಳು ನಾಶವಾಗಿ ಹೋಗದಂತೆ ನೋಡಿಕೊಳ್ಳಿರಿ.
ಅವರು ಮಹಾಪರಿಶುದ್ಧ ವಸ್ತುಗಳ ಸಮೀಪಕ್ಕೆ ಬರುವಾಗ, ಅವರು ಸಾಯದೆ ಬದುಕುವ ಹಾಗೆ ಹೀಗೆ ಎಚ್ಚರಿಕೆ ವಹಿಸಬೇಕು: ಆರೋನನೂ ಅವನ ಪುತ್ರರೂ ಒಳಗೆ ಪ್ರವೇಶಿಸಿ, ಅವರಲ್ಲಿ ಒಬ್ಬೊಬ್ಬನನ್ನು ಅವನ ಕೆಲಸಕ್ಕೂ ಅವನ ಹೊರೆಯನ್ನೂ ನೇಮಿಸಬೇಕು.
ಆದರೆ ಕೊಹಾತ್ಯರು ದೇವದರ್ಶನದ ಗುಡಾರದ ಒಳಗೆ ಬಂದು, ಒಂದು ಕ್ಷಣವೂ ಆ ಪವಿತ್ರ ವಸ್ತುಗಳನ್ನು ನೋಡಬಾರದು, ನೋಡಿ ಸಾವನ್ನಪ್ಪದಿರಲಿ.”