ನಾವು ಸುರಕ್ಷಿತವಾಗಿ ದಡ ಸೇರಿದ ಮೇಲೆ, ಆ ದ್ವೀಪವು ಮಾಲ್ಟ ದ್ವೀಪವೆಂದು ಕಂಡುಕೊಂಡೆವು.
EN
Copywork
Kannada OKCV Acts 28장
Copywork is not a speed-typing drill but time to re-hold the words and flow of Scripture, one verse at a time. Your input is saved temporarily in this browser, and to your account when you are signed in.
Practice by section · Acts
ಆ ದ್ವೀಪದ ನಿವಾಸಿಗಳು ನಮಗೆ ಅಸಾಧಾರಣವಾದ ದಯೆತೋರಿಸಿದರು. ಆಗ ಮಳೆ ಬರುತ್ತಿದ್ದು ಬಹಳ ಚಳಿಯಿದ್ದುದರಿಂದ ಅವರು ಬೆಂಕಿಹೊತ್ತಿಸಿ ನಮ್ಮನ್ನು ಬರಮಾಡಿಕೊಂಡರು.
ಪೌಲನು ಕಟ್ಟಿಗೆ ಕೂಡಿಸಿ ಹೊರೆಯನ್ನು ತಂದು ಬೆಂಕಿಯಲ್ಲಿ ಹಾಕಲು ಶಾಖದಿಂದ ಒಂದು ಸರ್ಪವು ಹೊರಬಂದು ಅವನ ಕೈಗೆ ಸುತ್ತಿಕೊಂಡಿತು.
ಸರ್ಪವು ಪೌಲನ ಕೈಗೆ ಸುತ್ತಿಕೊಂಡಿರುವುದನ್ನು ದ್ವೀಪ ನಿವಾಸಿಗಳು ಕಂಡಾಗ, “ನಿಶ್ವಯವಾಗಿ ಈ ಮನುಷ್ಯನು ಕೊಲೆಗಾರನಾಗಿರಬೇಕು. ಸಮುದ್ರದಿಂದ ತಪ್ಪಿಸಿಕೊಂಡು ಬಂದರೂ ನ್ಯಾಯವು ಅವನನ್ನು ಜೀವಿಸಲಿಕ್ಕೆ ಬಿಡಲಿಲ್ಲ,” ಎಂದು ತಮ್ಮತಮ್ಮೊಳಗೆ ಮಾತನಾಡಿಕೊಂಡರು.
ಆದರೆ ಪೌಲನು ಸರ್ಪವನ್ನು ಬೆಂಕಿಯೊಳಗೆ ಝಾಡಿಸಿ ಬಿಟ್ಟನು. ಅವನಿಗೆ ಯಾವ ಕೇಡೂ ಆಗಲಿಲ್ಲ.
ಅವನು ಬಾತುಹೋಗುತ್ತಾನೆ ಅಥವಾ ಇದ್ದಕ್ಕಿದ್ದಂತೆ ಸತ್ತು ಹೋಗುತ್ತಾನೆ ಎಂದು ಜನರು ಕಾದಿದ್ದರು. ಆದರೆ ಬಹಳ ಹೊತ್ತು ಕಾದು ನೋಡಿದ ಮೇಲೆ, ಅವನಿಗೆ ಕೆಟ್ಟದ್ದೇನೂ ಆಗದಿರುವುದನ್ನು ಕಂಡು ಅವರು ತಮ್ಮ ಮನಸ್ಸುಗಳನ್ನು ಬದಲಾಯಿಸಿಕೊಂಡು, “ಇವನೊಬ್ಬ ದೇವರು” ಎಂದು ಹೇಳಿಕೊಂಡರು.
ದ್ವೀಪದ ಮುಖ್ಯ ಅಧಿಕಾರಿ ಪೊಪ್ಲಿಯನೆಂಬುವನಿಗೆ ಸೇರಿದ ಹೊಲವು ಸಮೀಪದಲ್ಲಿಯೇ ಇತ್ತು. ಅವನು ನಮ್ಮನ್ನು ತನ್ನ ಮನೆಗೆ ಆಮಂತ್ರಿಸಿ ಮೂರು ದಿನ ನಮ್ಮನ್ನು ಉಪಚರಿಸಿದನು.
ಪೊಪ್ಲಿಯನ ತಂದೆ ಅಸ್ವಸ್ಥತೆಯಿಂದ ಮಲಗಿದ್ದನು. ಅವನು ಜ್ವರ ಮತ್ತು ರಕ್ತ ಭೇದಿಯಿಂದ ಬಾಧೆಗೊಳಗಾಗಿದ್ದನು. ಪೌಲನು ಅವನನ್ನು ಸಂದರ್ಶಿಸಿ, ಪ್ರಾರ್ಥನೆಮಾಡಿ, ಅವನ ಮೇಲೆ ತನ್ನ ಹಸ್ತಗಳನ್ನಿಟ್ಟು ಅವನನ್ನು ಗುಣಪಡಿಸಿದನು.
ಹೀಗಾದ ತರುವಾಯ ಆ ದ್ವೀಪದಲ್ಲಿಯೇ ಉಳಿದ ರೋಗಿಗಳು ಸಹ ಬಂದು ಗುಣಹೊಂದಿದರು.
ಅವರು ಅನೇಕ ವಿಧವಾಗಿ ನಮ್ಮನ್ನು ಗೌರವಿಸಿದರು. ನಾವು ಪ್ರಯಾಣಕ್ಕೆ ಸಿದ್ಧರಾದಾಗ ನಮಗೆ ಅಗತ್ಯವಿದ್ದವುಗಳನ್ನೆಲ್ಲಾ ತಂದು ಒದಗಿಸಿಕೊಟ್ಟರು.
ಮೂರು ತಿಂಗಳ ಸಮಯ ದಾಟಿದ ತರುವಾಯ ಆ ದ್ವೀಪದಲ್ಲಿ ಚಳಿಗಾಲ ಕಳೆದ ಮೇಲೆ ಒಂದು ನೌಕೆಯನ್ನು ಹತ್ತಿ ಹೊರಟೆವು. ಅದು ಅಶ್ವಿನಿ ಚಿಹ್ನೆಯಿದ್ದ ಅಲೆಕ್ಸಾಂದ್ರಿಯದ ಒಂದು ನೌಕೆಯಾಗಿತ್ತು.
ಸುರಕೂಸ್ ಎಂಬ ಪಟ್ಟಣವನ್ನು ತಲುಪಿ ಅಲ್ಲಿ ಮೂರು ದಿನ ಇದ್ದೆವು.
ಅಲ್ಲಿಂದ ಸಮುದ್ರ ಪ್ರಯಾಣ ಮುಂದುವರಿಸಿ ರೇಗಿಯ ಪಟ್ಟಣಕ್ಕೆ ಬಂದೆವು. ಮರುದಿನ ದಕ್ಷಿಣ ಗಾಳಿ ಬೀಸುತ್ತಿದ್ದುದರಿಂದ ಎರಡನೆಯ ದಿನ ಪೊತಿಯೋಲ ರೇವನ್ನು ತಲುಪಿದೆವು.
ಅಲ್ಲಿ ಕೆಲವು ಸಹೋದರರು ನಮ್ಮನ್ನು ಕಂಡು ಒಂದು ವಾರ ತಮ್ಮೊಂದಿಗೆ ಕಳೆಯಬೇಕೆಂದು ಆಮಂತ್ರಿಸಿದರು. ಕೊನೆಗೆ ನಾವು ರೋಮ್ ಸೇರಿದೆವು.
ಅಲ್ಲಿದ್ದ ಸಹೋದರರು ನಾವು ಬರುತ್ತೇವೆಂಬ ವಿಷಯವನ್ನು ಕೇಳಿ ನಮ್ಮನ್ನು ಎದುರುಗೊಳ್ಳಲು ಅಪ್ಪಿಯ ಪೇಟೆಗೂ ತ್ರಿಛತ್ರದ ಬಳಿಗೂ ಬಂದರು. ಪೌಲನು ಅವರನ್ನು ನೋಡಿ ದೇವರ ಸ್ತುತಿ ಮಾಡಿ ಧೈರ್ಯ ತಂದುಕೊಂಡನು.
ನಾವು ರೋಮ್ ಪಟ್ಟಣಕ್ಕೆ ಬಂದಾಗ, ತನ್ನ ಕಾವಲುಗಾರನಾಗಿದ್ದ ಸೈನಿಕನೊಂದಿಗೆ ಪ್ರತ್ಯೇಕವಾಗಿ ಇರಲು ಪೌಲನಿಗೆ ಅನುಮತಿ ದೊರೆಯಿತು.
ಮೂರು ದಿನಗಳಾದ ಮೇಲೆ ಪೌಲನು ಯೆಹೂದ್ಯರ ನಾಯಕರನ್ನು ಕರೆಯಿಸಿದನು. ಅವರೆಲ್ಲರೂ ಬಂದಾಗ ಅವರಿಗೆ, “ನನ್ನ ಸಹೋದರರೇ, ನಮ್ಮ ಜನರಿಗೂ ನಮ್ಮ ಪೂರ್ವಜರಿಗೂ ವಿರೋಧವಾಗಿ ನಾನು ಏನನ್ನೂ ಮಾಡಲಿಲ್ಲ. ಆದರೂ ನನ್ನನ್ನು ಯೆರೂಸಲೇಮಿನಲ್ಲಿ ಬಂಧಿಸಿ ರೋಮನ್ನರ ವಶಕ್ಕೆ ಒಪ್ಪಿಸಲಾಯಿತು.
ಅವರು ನನ್ನನ್ನು ವಿಚಾರಣೆ ಮಾಡಿ, ನಾನು ಮರಣಶಿಕ್ಷೆ ಹೊಂದಲು ಯಾವ ಅಪರಾಧವೂ ಇಲ್ಲದಿರುವುದನ್ನು ಕಂಡು ನನ್ನನ್ನು ಬಿಡುಗಡೆ ಮಾಡಲಿದ್ದರು.
ಆದರೆ ಯೆಹೂದ್ಯರು ಅದನ್ನು ವಿರೋಧಿಸಿದಾಗ, ನಾನು ನೇರವಾಗಿ ಕೈಸರನಿಗೆ ಮನವಿ ಮಾಡಿಕೊಳ್ಳಲೇಬೇಕಾಯಿತು. ನನಗೆ ಸ್ವದೇಶದವರ ವಿರೋಧವಾಗಿ ಹೊರಿಸಲು ಯಾವ ಆಪಾದನೆಯೂ ಇಲ್ಲ.
ಈ ಕಾರಣದಿಂದಲೇ ನಾನು ನಿಮ್ಮನ್ನು ಭೇಟಿಯಾಗಿ ಮಾತನಾಡಬೇಕೆಂದು ಕರೆಯಿಸಿದೆನು. ಇಸ್ರಾಯೇಲರ ನಿರೀಕ್ಷೆಯ ನಿಮಿತ್ತವಾಗಿಯೇ ನಾನು ಈ ಸರಪಣಿಗಳಿಂದ ಬಂಧಿತನಾಗಿದ್ದೇನೆ,” ಎಂದನು.
ಅದಕ್ಕೆ ಅವರು, “ನಿನ್ನ ವಿಷಯದಲ್ಲಿ ಯೂದಾಯದಿಂದ ನಮಗೆ ಯಾವ ಪತ್ರವೂ ಬಂದಿಲ್ಲ. ಅಲ್ಲಿಂದ ಬಂದ ಸಹೋದರರಲ್ಲಿ ಯಾರೂ ನಿನ್ನ ವಿಷಯದಲ್ಲಿ ಏನನ್ನೂ ವರದಿ ಮಾಡಿಲ್ಲ. ನಿನ್ನ ಬಗ್ಗೆ ಯಾವ ಕೆಟ್ಟದ್ದನ್ನೂ ಹೇಳಿಲ್ಲ.
ಆದರೆ ನಿನ್ನ ಅಭಿಪ್ರಾಯಗಳೇನೆಂಬುದನ್ನು ಕೇಳಲು ನಮಗೆ ಮನಸ್ಸಿದೆ. ಏಕೆಂದರೆ ಈ ಪಂಥದ ವಿರುದ್ಧವಾಗಿ ಎಲ್ಲಾ ಕಡೆಗಳಲ್ಲಿ ಜನರು ಮಾತನಾಡುತ್ತಿರುವುದನ್ನು ನಾವು ಬಲ್ಲೆವು,” ಎಂದರು.
ಅವರು ಒಂದು ದಿನ ಪೌಲನೊಂದಿಗಿರಲು ಏರ್ಪಡಿಸಿ, ಅವನಿದ್ದ ಸ್ಥಳಕ್ಕೆ ಬಹುಮಂದಿ ಕೂಡಿಬಂದರು. ಬೆಳಿಗ್ಗೆಯಿಂದ ಸಂಜೆಯವರೆಗೆ ಅವನು ದೇವರ ರಾಜ್ಯದ ಬಗ್ಗೆ ಖಚಿತವಾಗಿ ಸಾಕ್ಷಿ ಕೊಡುತ್ತಾ, ಮೋಶೆಯ ನಿಯಮ ಮತ್ತು ಪ್ರವಾದಿಗಳ ಗ್ರಂಥಗಳಿಂದ ಯೇಸುವಿನ ಬಗ್ಗೆ ವಿವರಿಸಿ ಅವರ ಮನವೊಲಿಸಲು ಪ್ರಯತ್ನಿಸಿದನು.
ಕೆಲವರಿಗೆ ಅವನು ಹೇಳಿದ್ದರ ಬಗ್ಗೆ ಮನದಟ್ಟಾಯಿತು.
ಆದರೆ ಬೇರೆಯವರು ನಂಬಲಿಲ್ಲ. ಅವರು ತಮ್ಮತಮ್ಮಲ್ಲಿಯೇ ಭಿನ್ನಾಭಿಪ್ರಾಯ ಉಳ್ಳವರಾಗಿರಲು ಪೌಲನು ಅವರಿಗೆ, “ಪವಿತ್ರಾತ್ಮ ದೇವರು ನಿಮ್ಮ ಪಿತೃಗಳಿಗೆ ಪ್ರವಾದಿ ಯೆಶಾಯನ ಮುಖಾಂತರ ಈ ಮಾತುಗಳನ್ನು ಸರಿಯಾಗಿಯೇ ಹೇಳಿದ್ದಾರೆ:
“ ‘ಈ ಜನರ ಬಳಿಗೆ ಹೋಗಿ ಹೇಳು,
ಈ ಜನರ ಹೃದಯವು ಕಠೋರವಾಗಿದೆ;
“ಆದ್ದರಿಂದ ದೇವರ ರಕ್ಷಣೆಯು ಯೆಹೂದ್ಯರಲ್ಲದವರಿಗೆ ಒದಗಿ ಬಂದಿದೆ ಎಂಬುದು ನಿಮಗೆ ತಿಳಿದಿರಲಿ. ಅವರು ಅದಕ್ಕೆ ಕಿವಿಗೊಡುವರು,” ಎಂದನು.
ಪೌಲನು ಇದನ್ನು ಹೇಳಿದ ತರುವಾಯ ಯೆಹೂದ್ಯರು ತಮ್ಮತಮ್ಮಲ್ಲಿಯೇ ಕಟುವಾಗಿ ಚರ್ಚಿಸಿಕೊಳ್ಳುತ್ತಾ ಹೊರಟು ಹೋದರು.
ಪೌಲನು ತಾನು ಬಾಡಿಗೆಗೆ ತೆಗೆದುಕೊಂಡ ಮನೆಯಲ್ಲಿ ಎರಡು ವರ್ಷಗಳ ಕಾಲವಿದ್ದು ತನ್ನ ಬಳಿಗೆ ಬಂದವರನ್ನೆಲ್ಲಾ ಸ್ವಾಗತಿಸುತ್ತಿದ್ದನು.
ಅವನು ಧೈರ್ಯದಿಂದ ಯಾವ ಅಡ್ಡಿ ಆತಂಕಗಳಿಲ್ಲದೇ ದೇವರ ರಾಜ್ಯವನ್ನು ಪ್ರಕಟಿಸುತ್ತಾ, ಕರ್ತ ಆಗಿರುವ ಯೇಸುಕ್ರಿಸ್ತರ ವಿಷಯವಾಗಿ ಉಪದೇಶ ಮಾಡುತ್ತಾ ಇದ್ದನು.