ಮೂರನೆಯ ದಿವಸದಲ್ಲಿ, ಎಸ್ತೇರಳು ರಾಜವಸ್ತ್ರ ಆಭರಣಗಳನ್ನು ಧರಿಸಿಕೊಂಡು ಅರಮನೆಗೆ ಎದುರಾಗಿರುವ ಅರಸನ ಒಳಗಣ ಪ್ರಾಕಾರವನ್ನು ಪ್ರವೇಶಿಸಿ ನಿಂತಳು. ಅರಸನು ರಾಜಮಂದಿರದೊಳಗೆ ತನ್ನ ರಾಜಸಿಂಹಾಸನದ ಮೇಲೆ ಬಾಗಿಲಿಗೆ ಎದುರಾಗಿ ಕುಳಿತಿದ್ದನು.
KO
Copywork
Kannada OKCV 에스더 5장
성경필사는 빠르게 끝내는 입력 훈련이 아니라, 한 절씩 말씀의 문장과 흐름을 다시 붙드는 시간입니다. 입력 내용은 이 브라우저에 임시 저장되며, 로그인하면 계정에도 저장됩니다.
소제목 단위로 진행 · 에스더
ಅರಸನು ಪ್ರಾಕಾರದಲ್ಲಿ ನಿಂತಿರುವ ಎಸ್ತೇರ್ ರಾಣಿಯನ್ನು ಕಂಡ ಕೂಡಲೆ, ಆಕೆಗೆ ತನ್ನ ಮೆಚ್ಚುಗೆಯನ್ನು ತೋರಿ ತನ್ನ ಕೈಯಲ್ಲಿದ್ದ ಸ್ವರ್ಣದಂಡವನ್ನು ಎಸ್ತೇರಳ ಕಡೆಗೆ ಚಾಚಿದನು. ಎಸ್ತೇರಳು ಸಮೀಪಕ್ಕೆ ಬಂದು ರಾಜದಂಡದ ತುದಿಯನ್ನು ಮುಟ್ಟಿದಳು.
ಆಗ ಅರಸನು ಅವಳಿಗೆ, “ಎಸ್ತೇರ್ ರಾಣಿಯೇ, ನಿನ್ನ ವಿಜ್ಞಾಪನೆ ಏನು? ನಿನ್ನ ಬೇಡಿಕೆ ಏನು? ಅದು ನನ್ನ ರಾಜ್ಯದ ಅರ್ಧವಾಗಿದ್ದರೂ ಸರಿ, ನಾನು ಅದನ್ನು ನಿನಗೆ ಕೊಡುವೆನು,” ಎಂದನು.
ಅದಕ್ಕೆ ಎಸ್ತೇರಳು ಅರಸನಿಗೆ, “ಸಮ್ಮತಿಯಾದರೆ ನಾನು ಅರಸನಿಗಾಗಿ ಸಿದ್ಧಮಾಡಿಸಿರುವ ಔತಣಕ್ಕೆ ಅರಸನೂ ಹಾಮಾನನೂ ಈ ಹೊತ್ತು ಬರಬೇಕು,” ಎಂದಳು.
ಆಗ ಅರಸನು, “ಎಸ್ತೇರಳು ಹೇಳಿದ ಪ್ರಕಾರ ನಾವು ಮಾಡಲು, ಬೇಗನೆ ಹಾಮಾನನನ್ನು ಕರೆದುಕೊಂಡು ಬನ್ನಿರಿ,” ಎಂದು ಆಜ್ಞಾಪಿಸಿದನು.
ದ್ರಾಕ್ಷಾರಸವನ್ನು ಪಾನಮಾಡುತ್ತಿರುವಾಗ ಅರಸನು ಮತ್ತೊಮ್ಮೆ ಎಸ್ತೇರಳಿಗೆ, “ಈಗ ನಿನ್ನ ವಿಜ್ಞಾಪನೆ ಏನು? ನಿನ್ನ ಬೇಡಿಕೆ ಏನು? ಅದು ನನ್ನ ರಾಜ್ಯದ ಅರ್ಧವಾಗಿದ್ದರೂ ಸರಿ, ನಾನು ಅದನ್ನು ನಿನಗೆ ಕೊಡುವೆನು,” ಎಂದನು.
ಅದಕ್ಕೆ ಎಸ್ತೇರಳು, “ನನ್ನ ಬೇಡಿಕೆಯೂ ನನ್ನ ವಿಜ್ಞಾಪನೆಯೂ ಇದೇ:
ಅರಸನಿಗೆ ಸಮ್ಮತಿಯಾದರೆ, ಅರಸನಿಗೂ ಹಾಮಾನನಿಗೂ ನಾನು ಮಾಡಲಿರುವ ಔತಣಕ್ಕೆ ನಾಳೆಯೂ ಬರಬೇಕು. ಆಗ ಅರಸನ ಪ್ರಶ್ನೆಗೆ ಉತ್ತರಕೊಡುವೆನು,” ಎಂದಳು.
ಆ ದಿನದಲ್ಲಿ ಹಾಮಾನನು ಹರ್ಷಭರಿತನಾಗಿ ಹೊರಟುಹೋದನು. ಆದರೆ ಅರಮನೆಯ ಹೆಬ್ಬಾಗಿಲಲ್ಲಿರುವ ಮೊರ್ದೆಕೈ ತನಗೆ ಭಯಪಡದೆ ಕುಳಿತುಕೊಂಡೇ ಇರುವುದನ್ನು ಹಾಮಾನನು ಕಂಡು ಮೊರ್ದೆಕೈಯ ಮೇಲೆ ಕೋಪಗೊಂಡನು.
ಆದರೂ ಹಾಮಾನನು ಬಿಗಿಹಿಡಿದುಕೊಂಡು ತನ್ನ ಮನೆಗೆ ಹೋದನು.
ಹಾಮಾನನು ತನ್ನ ಐಶ್ವರ್ಯದ ಘನವನ್ನೂ, ತನ್ನ ಮಕ್ಕಳ ಹೆಚ್ಚಳವನ್ನೂ, ಅರಸನು ತನ್ನನ್ನು ಹೆಚ್ಚಿಸಿದ್ದನ್ನೂ, ಅರಸನ ಪ್ರಭುಗಳ ಹಾಗೂ ಸೇವಕರ ಮೇಲೆ ಎತ್ತಿದ್ದನ್ನೂ ಹೀಗೆ ಎಲ್ಲವನ್ನೂ ಅವರಿಗೆ ವಿವರವಾಗಿ ಹೇಳಿದನು.
ಇದಲ್ಲದೆ ಹಾಮಾನನು, “ಎಸ್ತೇರ್ ರಾಣಿಯು ತಾನು ಮಾಡಿಸಿದ ಔತಣಕ್ಕೆ ನನ್ನ ಹೊರತು ಅರಸನ ಸಂಗಡ ಬೇರೆ ಯಾರನ್ನು ಕರೆಯಲಿಲ್ಲ. ಮರುದಿನವೂ ಅರಸನೊಂದಿಗೆ ಔತಣಮಾಡಲು ನನ್ನನ್ನು ಆಹ್ವಾನಿಸಿದ್ದಾಳೆ.
ಆದರೆ ಯೆಹೂದ್ಯನಾದ ಮೊರ್ದೆಕೈಯು ಅರಮನೆಯ ಬಾಗಿಲಲ್ಲಿ ನನ್ನ ಕಣ್ಣೆದುರು ಕುಳಿತಿರುವವರೆಗೂ ಇದೆಲ್ಲದರಿಂದ ನನಗೆ ತೃಪ್ತಿಯಾಗುವುದಿಲ್ಲ” ಎಂದನು.
ಆಗ ಅವನ ಹೆಂಡತಿಯಾದ ಜೆರೆಷಳೂ ಅವನ ಸಮಸ್ತ ಸ್ನೇಹಿತರೂ ಅವನಿಗೆ, “ಅರಸನ ಅಪ್ಪಣೆಯನ್ನು ಪಡೆದು ಮೊರ್ದೆಕೈಯನ್ನು ಬೆಳಿಗ್ಗೆ ಗಲ್ಲಿಗೇರಿಸಲು ಇಪ್ಪತ್ತು ಮೀಟರ್ ಉದ್ದದ ಒಂದು ಗಲ್ಲುಮರವನ್ನು ಮಾಡು. ತರುವಾಯ ಅರಸನ ಸಂಗಡ ಔತಣಕ್ಕೆ ಹೋಗಿ ಸಂತೋಷವಾಗಿರು,” ಎಂದರು. ಈ ಸಲಹೆ ಹಾಮಾನನಿಗೆ ಮೆಚ್ಚಿಕೆಯಾದದ್ದರಿಂದ ಗಲ್ಲುಮರವನ್ನು ಸಿದ್ಧಮಾಡಿಸಿದನು.