ಹನ್ನೊಂದನೆಯ ವರ್ಷ, ತಿಂಗಳಿನ ಮೊದಲನೆಯ ದಿನದಲ್ಲಿ ಯೆಹೋವ ದೇವರ ವಾಕ್ಯವು ನನಗೆ ಬಂದಿತು.
KO
Copywork
Kannada OKCV 에스겔 26장
성경필사는 빠르게 끝내는 입력 훈련이 아니라, 한 절씩 말씀의 문장과 흐름을 다시 붙드는 시간입니다. 입력 내용은 이 브라우저에 임시 저장되며, 로그인하면 계정에도 저장됩니다.
소제목 단위로 진행 · 에스겔
“ಮನುಷ್ಯಪುತ್ರನೇ, ಟೈರ್, ಯೆರೂಸಲೇಮಿನ ವಿಷಯವಾಗಿ, ‘ಆಹಾ, ಜನರ ದ್ವಾರವಾಗಿದ್ದದ್ದು ಮುರಿದುಹೋಯಿತು, ಅದು ನನ್ನ ಕಡೆಗೆ ತೆರೆದುಕೊಂಡಿದೆ. ಯೆರೂಸಲೇಮು ಹಾಳಾದದ್ದರಿಂದ ನಾನು ವೃದ್ಧಿಗೊಳ್ಳುವೆನು,’
ಆದ್ದರಿಂದ ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ಟೈರ್ ದೇಶವೇ, ನಾನು ನಿನಗೆ ವಿರೋಧವಾಗಿದ್ದೇನೆ, ಸಮುದ್ರವು ತನ್ನ ಅಲೆಗಳನ್ನು ಹೇಗೆ ಬರಮಾಡುವುದೋ ಹಾಗೆಯೇ ನಾನು ನಿನಗೆ ವಿರೋಧವಾಗಿ ಅನೇಕ ಜನಾಂಗಗಳನ್ನು ನಿನ್ನ ಮೇಲೆ ಬರಮಾಡುವೆನು.
ಅವರು ಟೈರಿನ ಗೋಡೆಗಳನ್ನು ಕೆಡಿಸಿ ಅದರ ಗೋಪುರಗಳನ್ನು ಒಡೆದು ಬಿಡುವರು, ನಾನು ಅದರ ಧೂಳನ್ನು ಒರಸಿ ಅದನ್ನು ಬೋಳು ಬಂಡೆಯಂತೆ ಮಾಡುವೆನು.
ಅದು ಸಮುದ್ರದ ಮಧ್ಯದಲ್ಲಿ ಬಲೆಗಳನ್ನು ಹಾಕುವ ಸ್ಥಳವಾಗಿರುವುದು. ನಾನೇ ಅದನ್ನು ಹೇಳಿದ್ದೇನೆಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ. ಅದು ಜನಾಂಗಗಳಿಗೆ ಕೊಳ್ಳೆಯಾಗಿರುವುದು,
ಮತ್ತು ಪ್ರಧಾನ ಭೂಮಿಯಲ್ಲಿರುವ ಅದರ ಪುತ್ರಿಯರು ಖಡ್ಗದಿಂದ ಹತರಾಗುವರು. ಆಗ ನಾನೇ ಯೆಹೋವ ದೇವರೆಂದು ಎಲ್ಲರಿಗೂ ತಿಳಿಯುವುದು.
“ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ಇಗೋ, ಉತ್ತರದ ರಾಜಾಧಿರಾಜನೂ ಬಾಬಿಲೋನಿನ ಅರಸನೂ ಆದ ನೆಬೂಕದ್ನೆಚ್ಚರನನ್ನು ಕುದುರೆಗಳ ಸಂಗಡವೂ ಸವಾರರ ಸಂಗಡವೂ ರಥಗಳ ಸಂಗಡವೂ ಬಹುಜನರ ಸಂಗಡವೂ ಟೈರಿನ ಮೇಲೆ ತರುತ್ತೇನೆ.
ಅವನು ಪ್ರಧಾನ ಭೂಮಿಯಲ್ಲಿನ ನಿನ್ನ ಪುತ್ರಿಯರನ್ನು ಖಡ್ಗದಿಂದ ಕೊಂದು ನಿನಗೆ ವಿರೋಧವಾಗಿ ಗುರಾಣಿಯನ್ನು ಎತ್ತುವನು.
ತನ್ನ ಯುದ್ಧ ಯಂತ್ರಗಳನ್ನು ನಿನ್ನ ಗೋಡೆಗಳಿಗೆ ತಾಕಿಸುವನು. ತನ್ನ ಆಯುಧಗಳಿಂದ ನಿನ್ನ ಗೋಪುರಗಳನ್ನು ಕೆಡವಿಬಿಡುವನು.
ಅವನ ಲೆಕ್ಕವಿಲ್ಲದ ಕುದುರೆಗಳಿಂದ ಎದ್ದ ಧೂಳು ನಿನ್ನನ್ನು ಮುಸುಕುವದು, ಒಡಕು ಬಿದ್ದ ಕೋಟೆಯೊಳಗೆ ಶತ್ರುಗಳು ಪ್ರವೇಶಿಸುವ ಪ್ರಕಾರ ಅವರು ನಿನ್ನ ಬಾಗಿಲುಗಳಲ್ಲಿ ಪ್ರವೇಶಿಸುವಾಗ ಸವಾರರ, ರಥಗಳ, ಚಕ್ರಗಳ ಶಬ್ದದಿಂದ ನಿನ್ನ ಗೋಡೆಗಳು ಕದಲುವುವು.
ಅವನು ತನ್ನ ಕುದುರೆಗಳ ಗೊರಸುಗಳಿಂದ ನಿನ್ನ ಬೀದಿಗಳನ್ನೆಲ್ಲಾ ತುಳಿಸುವನು; ನಿನ್ನ ಜನರನ್ನು ಖಡ್ಗದಿಂದ ಕೊಲ್ಲುವನು; ನಿನ್ನ ಬಲವಾದ ಕಂಬಗಳು ನೆಲಕ್ಕೆ ಬೀಳುವುವು.
ಅವರು ನಿನ್ನ ಸಂಪತ್ತನ್ನು ಕಸಿದುಕೊಂಡು, ನಿನ್ನ ಸರಕುಗಳನ್ನು ಕೊಳ್ಳೆಹೊಡೆದು, ನಿನ್ನ ಗೋಡೆಗಳನ್ನು ಒಡೆದು, ನಿನ್ನ ರಮ್ಯವಾದ ಮನೆಗಳನ್ನು ಕೆಡವಿ, ನಿನ್ನ ಕಲ್ಲುಗಳನ್ನೂ ನಿನ್ನ ಮರಗಳನ್ನೂ ಧೂಳನ್ನೂ ನೀರಿನಲ್ಲಿ ಹಾಕುವರು.
ಆಗ ನಿನ್ನ ಹಾಡುಗಳ ಶಬ್ದವನ್ನು ನಿಲ್ಲಿಸುವೆನು. ನಿನ್ನ ಕಿನ್ನರಿಗಳ ಧ್ವನಿ ಇನ್ನು ಕೇಳಿಸುವುದಿಲ್ಲ.
ನಿನ್ನನ್ನು ಬೋಳು ಬಂಡೆಯಂತೆ ಮಾಡುವೆನು. ನೀನು ಅಲ್ಲಿ ಬಲೆಹಾಸುವ ಸ್ಥಳವಾಗುವೆ. ನೀನು ಪುನಃ ಕಟ್ಟಲಾಗದೆ ಹೋಗುವಿ. ಯೆಹೋವ ದೇವರಾದ ನಾನೇ ಅದನ್ನು ಹೇಳಿದ್ದೇನೆಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.
“ಸಾರ್ವಭೌಮ ಯೆಹೋವ ದೇವರು ಟೈರಿಗೆ ಹೀಗೆ ಹೇಳುತ್ತಾರೆ: ನಿನ್ನ ಪತನದ ಶಬ್ದಕ್ಕೂ, ಗಾಯಪಟ್ಟವರು ಕೂಗುವಾಗಲೂ, ನಿನ್ನ ಮಧ್ಯದಲ್ಲಿ ಕೊಲೆಯಾಗುವಾಗಲೂ ಸಮುದ್ರತೀರದ ಪ್ರದೇಶಗಳು ನಡುಗುವುದಿಲ್ಲವೇ?
ಆಮೇಲೆ ಸಮುದ್ರತೀರದ ಎಲ್ಲಾ ರಾಜಕುಮಾರರು ತಮ್ಮ ಸಿಂಹಾಸನಗಳನ್ನು ಬಿಟ್ಟು ಇಳಿಯುವರು; ತಮ್ಮ ನಿಲುವಂಗಿಗಳನ್ನು ತೆಗೆದುಹಾಕುವರು, ಕಸೂತಿ ಕೆಲಸದಿಂದ ಹೊಲಿದ ತಮ್ಮ ವಸ್ತ್ರಗಳನ್ನು ಇಟ್ಟುಬಿಡುವರು. ನಡುಗುವಿಕೆಯನ್ನು ಹೊದ್ದುಕೊಳ್ಳುವರು; ನೆಲದ ಮೇಲೆ ಕುಳಿತುಕೊಳ್ಳುವರು, ಕ್ಷಣಕ್ಷಣಕ್ಕೂ ನಡುಗುವರು, ನಿನ್ನ ವಿಷಯವಾಗಿ ಭಯಭೀತರಾದರು.
ನಿನ್ನ ವಿಷಯದಲ್ಲಿ ಗೋಳಾಟವನ್ನೆತ್ತಿ ನಿನಗೆ ಹೇಳುವುದೇನೆಂದರೆ:
ಈಗ ನೀನು ಬೀಳುವ ದಿವಸದಲ್ಲಿ
“ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ನಾನು ನಿನ್ನನ್ನು ನಿವಾಸಿಗಳಿಲ್ಲದ ಪಟ್ಟಣದ ಹಾಗೆ ಹಾಳಾದ ಪಟ್ಟಣವಾಗಿ ಮಾಡುವಾಗ ಹೆಚ್ಚು ನೀರು ಮುಚ್ಚುವ ಹಾಗೆ ಅಗಾಧ ಜಲರಾಶಿಯನ್ನು ನಿನ್ನ ಮೇಲೆ ಬರಮಾಡುವೆನು.
ನಿನ್ನನ್ನು ಅಧೋಲೋಕಕ್ಕೆ ತಳ್ಳಿ ಪಾತಾಳಕ್ಕೆ ಇಳಿದ ನಿಮ್ಮ ಪೂರ್ವಕಾಲದವರೊಂದಿಗೆ ವಾಸಿಸುವಂತೆ ಮಾಡುವೆನು. ನಾನು ನಿನ್ನ ಮಹಿಮೆಯನ್ನು ಜೀವವುಳ್ಳವರ ಲೋಕದಲ್ಲಿ ನೆಲೆಗೊಳಿಸದೆ ನಿರ್ಜನವಾಗುವಂತೆ ನಿನ್ನನ್ನು ಪಾತಾಳಕ್ಕಿಳಿದವರೊಂದಿಗೆ ವಾಸಿಸುವಂತೆ ಸೇರಿಸುವೆನು.
ನಾನೂ ನಿನ್ನನ್ನು ಭಯಂಕರವಾದ ಅಂತ್ಯಕ್ಕೆ ತರುವೆನು. ಇನ್ನು ಮೇಲೆ ನೀನು ಇರುವುದಿಲ್ಲ; ಆಮೇಲೆ ನಿನ್ನನ್ನು ಎಷ್ಟು ಹುಡುಕಿದರೂ ನೀನು ಸಿಗುವುದಿಲ್ಲ ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.”